ಜಿಲ್ಲೆಯ ಬಗ್ಗೆ

ಕೊಡಗು, ಇದು ಪಶ್ಚಿಮ ಘಟ್ಟದ ​​ ತಪ್ಪಲಿನ ದಟ್ಟವಾದ ಕಾಡುಗಳಿಂದ ವೈಭವೀಕರಿಸಿದ ಕರ್ನಾಟಕದ ಅತ್ಯಂತ ಸುಂದರ ಗಿರಿಧಾಮವಾಗಿದೆ. ಇದು ನೈಋತ್ಯ ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲಿ 4,102 ಚದರ ಕಿಲೋಮೀಟರ್ (1,584 ಚದರ ಮೈಲಿ) ಪ್ರದೇಶವನ್ನು ಆವರಿಸಿದೆ. 2011 ರ ಜನಗಣತಿಯಂತೆ ಜಿಲ್ಲೆಯ ಜನಸಂಖ್ಯೆಯು 554,519 ರಷ್ಟಿದೆ, 13.74% ರಷ್ಟು ಜಿಲ್ಲೆಯ ನಗರ ಕೇಂದ್ರಗಳಲ್ಲಿ ಕೇಂದ್ರೀಕೃತಗೊಂಡಿದೆ, ಇದು ಕರ್ನಾಟಕದ 30 ಜಿಲ್ಲೆಗಳಲ್ಲಿಯೇ ಅತಿ ಕಡಿಮೆ ಜನಸಂಖ್ಯೆಯನ್ನು ಹೊಂದಿದೆ. ಕೊಡಗಿನ ಕಾಫಿ ಮತ್ತು ಕೊಡಗಿನ “ಕೆಚ್ಚೆದೆಯ ಯೋಧರರು” ಪ್ರಪಂಚದಲ್ಲಿ ಪ್ರಸಿದ್ದಿ ಪಡೆದಿದೆ. ಮಡಿಕೇರಿಯು ಕೊಡಗಿನ ಕೇಂದ್ರಸ್ಥಾನವಾಗಿದೆ. ಕೊಡಗು ಕೊಡವ ಭಾಷೆಯನ್ನು ಮಾತನಾಡುವ ಸ್ಥಳೀಯರಿಗೆ ನೆಲೆಯಾಗಿದೆ.

ಕೊಡಗಿನ ಅಧಿಕ ಭೂ ಭಾಗವು ಕೃಷಿಗಾಗಿ ಬಳಸಲಾಗುತ್ತಿದೆ. ಐತಿಹಾಸಿಕವಾಗಿ ಮತ್ತು ವಿಶಿಷ್ಟವಾಗಿ ಭತ್ತದ ಗದ್ದೆಗಳು ಕಣಿವೆ ಪ್ರದೇಶದಲ್ಲಿ ಕಂಡುಬರುತ್ತದೆ. ಕಾಫಿ ಮತ್ತು ಮೆಣಸಿನಗಿಡಗಳು ಸುತ್ತಮುತ್ತಲಿನ ಬೆಟ್ಟಗಳಲ್ಲಿ ಮುಖ್ಯವಾಗಿ ಮಡಿಕೇರಿ ಬಳಿ ಕಂಡುಬರುತ್ತದೆ. ಸಾಮಾನ್ಯವಾಗಿ ಕಂಡುಬರುವಂತಹಾ ಬೆಳೆ ಕಾಫಿ, ಅದರಲ್ಲೂ ವಿಶೇಷವಾಗಿ ಕಾಫೀ ರೋಬಸ್ಟಾ ಹೇರಳವಾಗಿ ಬೆಳೆಯುತ್ತಾರೆ. ಇದು ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುದ್ದಗಿರಿಯ ನಂತರ ಭಾರತದ ಎರಡನೇ ಕಾಫಿ ಉತ್ಪಾದನಾ ಪ್ರದೇಶವಾಗಿದೆ. ಇದರಿಂದ ಕೊಡಗು ಭಾರತದ ಶ್ರೀಮಂತಜಿಲ್ಲೆಗಳಲ್ಲಿ ಒಂದಾಗಿ ಬೆಳೆದಿದೆ.

ಕೊಡಗು ವನ್ಯಜೀವಿ ಸಂಪನ್ಮೂಲಗಳಿಂದ ಸಮೃದ್ಧವೆಂದು ಪರಿಗಣಿಸಲಾಗಿದೆ . ಮೂರು ವನ್ಯಜೀವಿ ಅಭಯಾರಣ್ಯಗಳು ಮತ್ತು ಒಂದು ರಾಷ್ಟ್ರೀಯ ಉದ್ಯಾನವನವನ್ನು ಹೊಂದಿದೆ: ಬ್ರಹ್ಮಗಿರಿ, ತಲಕಾವೇರಿ ಮತ್ತು ಪುಷ್ಪಗಿರಿ ವನ್ಯಜೀವಿ ಅಭಯಾರಣ್ಯಗಳು ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನ ಅಥವಾ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನವೆಂದೂ ಕರೆಯಲಾಗುತ್ತದೆ.

ಮತಷ್ಟು ಓದಿ

ಬಡತನ ನಿರ್ಮೂಲನ ಯೋಜನೆಗಳು

Sl no ಇಲಾಖೆ ಯೋಜನೆಗಳು ಮತ್ತು ಲಿಂಕ್‌ಗಳು
1 ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ
2 ಕೃಷಿ ಇಲಾಖೆ
3 ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4 ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
5 Lead Bank
6 ಕಾರ್ಮಿಕ ಇಲಾಖೆ
7 ವಸತಿ ಇಲಾಖೆ
8 ಗ್ರಾಮೀಣಾಭಿವೃಧ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ
9 ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
10 ಗ್ರಾಮೀಣಾಭಿವೃಧ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ
11 ಜಿಲ್ಲಾ ನಗರಾಭಿವೃದ್ಧಿ ಕೋಶ

ನಮ್ಮ ಸಾಧಕರು


Rani Machaiah

ಡಾ. ರಾಣಿ ಮಾಚಯ್ಯ

ಡಾ. ರಾಣಿ ಮಾಚಯ್ಯ ಅವರು ಕೊಡಗಿನ ಪ್ರಸಿದ್ಧ ಜಾನಪದ ಕಲಾವಿದೆ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದು, ಸಾಂಪ್ರದಾಯಿಕ ಉಮ್ಮತ್ತಾಟ್ ನೃತ್ಯವನ್ನು ಭಾರತದಾದ್ಯಂತ ಜನಪ್ರಿಯಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಪ್ರತಿಮ ದೇಶಭಕ್ತರು, ಯೋಧರು ಜನಿಸಿದ ಕೊಡಗಿನಲ್ಲಿ ಸಂಸ್ಕೃತಿ ಪೋಷಕರಿಗೇನೂ ಕೊರತೆಯಿಲ್ಲ, ಆದರೆ ಆ ಸಂಸ್ಕೃತಿಯನ್ನು ಹೊರ ಜಗತ್ತಿಗೆ ಸಮರ್ಥವಾಗಿ ಪರಿಚಯಿಸಿದವರಲ್ಲಿ ಮೊದಲಿಗರು ಡಾ.ರಾಣಿ ಮಾಚಯ್ಯನವರೆಂದರೆ ಅತಿಶಯೋಕ್ತಿಯಲ್ಲ, “ಉಮ್ಮತ್ತಾಟ್” ಎಂಬ ಮಹಿಳೆಯರ ನೃತ್ಯ ಪ್ರಕಾರವನ್ನು ದೇಶದೆಲ್ಲಡೆ ಜನಪ್ರಿಯಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಜನನ, ಬಾಲ್ಯ, ವಿದ್ಯಾಭ್ಯಾಸ, ವಿವಾಹ : ಡಾ. […]

Deepa Bhasthi

ದೀಪಾ ಭಾಸ್ತಿ

ದೀಪಾ ಭಾಸ್ತಿ ಅವರು ಕೊಡಗಿನ ಖ್ಯಾತ ಸಾಹಿತ್ಯ ಅನುವಾದಕಿಯಾಗಿದ್ದು, ಅಂತರರಾಷ್ಟ್ರೀಯ ಬುಕ್ಕರ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಅನುವಾದಕಿಯಾಗಿದ್ದಾರೆ. ಪರಿಚಯ ದೀಪಾ ಭಾಸ್ತಿ ಅವರು ಕನ್ನಡ ಮತ್ತು ಇಂಗ್ಲಿಷ್ ಬರಹಗಾರರು ಮತ್ತು ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ವಿಜೇತರಾದ ಸಾಹಿತ್ಯ ಅನುವಾದಕರು. ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತರಾದ ಮೊದಲ ಭಾರತೀಯ ಅನುವಾದಕರು ಮತ್ತು ಮೊದಲ ವರ್ಣೀಯ ಅನುವಾದಕರು ಎಂಬ ಹಿರಿಮೆ ದೀಪಾ ಅವರದು.ಮಡಿಕೇರಿಯಲ್ಲಿ ಜನಿಸಿದ (1983) ದೀಪಾ ಭಾಸ್ತಿ ಅಲ್ಲಿನ ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪ ಕಾಲೇಜಿನಲ್ಲಿ […]


ಜಿಲ್ಲೆಯ ಸಾರಾ೦ಶ

  • ಲೋಕಸಭೆ ಸದಸ್ಯರು: 1
  • ವಿಧಾನ ಸಭಾ ಸದಸ್ಯರು: 2
  • ವಿಧಾನ ಪರಿಷತ್ ಸದಸ್ಯರು: 4
  • ಜಿಲ್ಲಾ ಪಂಚಾಯತ್ ಸದಸ್ಯರು: 29
  • ತಾಲ್ಲೂಕು ಪಂಚಾಯತ್ ಸದಸ್ಯರು: 50
  • ಗ್ರಾಮ ಪಂಚಾಯತ್ ಸದಸ್ಯರು: 1260

[vc_raw_js]JTNDc2NyaXB0JTIwc3JjJTNEJTIyaHR0cHMlM0ElMkYlMkZtaWIuZ292LmluJTJGc2l0ZXMlMkZhbGwlMkZ0aGVtZXMlMkZtaWIlMkZqcyUyRm1pYi1iYW5uZXIuanMlMjIlM0UlM0MlMkZzY3JpcHQlM0U=[/vc_raw_js]